Connect with us

Dvgsuddi Kannada | online news portal | Kannada news online

ಗ್ರಾಮಕ್ಕೊಂದು ಸ್ಮಶಾನ ನಿರ್ಮಾಣಕ್ಕೆ ಸೂಚನೆ: ಕಂದಾಯ ಸಚಿವ ಆರ್. ಅಶೋಕ್

R Ashoka 33

ದಾವಣಗೆರೆ

ಗ್ರಾಮಕ್ಕೊಂದು ಸ್ಮಶಾನ ನಿರ್ಮಾಣಕ್ಕೆ ಸೂಚನೆ: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು: ರಾಜ್ಯದ ಗ್ರಾಮಕ್ಕೊಂದು ಸ್ಮಶಾನ ಇರಬೇಕು. ಹೀಗಾಗಿ  ಯಾವ ಗ್ರಾಮದಲ್ಲಿ ಸ್ಮಶಾನ ಇಲ್ಲವೋ ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ವಿಧಾನ ಪರಿಷತ್‍ನಲ್ಲಿ ಮಹಾಂತೇಶ ಕವಟಗಿ ಮಠ  ಪ್ರಶ್ನೆಗೆ ಉತ್ತರಿಸಿದ ಅವರು,  ಗ್ರಾಮಕ್ಕೊಂದು ಸ್ಮಶಾನ ಇರಬೇಕು. ಇದಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ 26 ಕೋಟಿ ಬಿಡುಗಡೆ ಮಾಡಿದೆ. ಸರ್ಕಾರ ಹಣ ನೀಡುತ್ತದೆ. ಆದರೆ ಕೃಷಿ ಭೂಮಿಯ ಬೆಲೆ ಹೆಚ್ಚಿರುವುದರಿಂದ, ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಜಾಗ ಖರೀದಿ ಮಾಡಲಾಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ರಸ್ತಾವನೆ ಪಡೆದು ಹೆಚ್ಚುವರಿ ಹಣ ನೀಡಿ, ಸ್ಮಶಾನಕ್ಕಾಗಿ ಭೂಮಿ ಖರೀದಿ ಮಾಡಲಾಗುವುದು ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 816 ಸ್ಮಶಾನಗಳಿವೆ, 372 ಗ್ರಾಮಗಳಲ್ಲಿ ಸ್ಮಶಾನ ಇಲ್ಲ. ಬೆಳಗಾವಿ, ಹುಕ್ಕೇರಿಯಲ್ಲಿ ಎರಡು ಗ್ರಾಮಗಳಲ್ಲಿ ಮಾತ್ರ ಸ್ಮಶಾನ ಇಲ್ಲ. ಉಳಿದಂತೆ ಖಾನಾಪುರದಲ್ಲಿ ಸಮಸ್ಯೆ ಇದೆ. ಅಲ್ಲಿಂದ ವಿಶೇಷ ಪ್ರಸ್ತಾವನೆ ಪಡೆದು ಸ್ಮಶಾನ ಭೂಮಿ ಒಗದಿಸುವುದಾಗಿ ಸಚಿವರು ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top