ದಾವಣಗೆರೆ: ಭರತ್ ಕಾಲೋನಿಯಲ್ಲಿ ಒಂದೇ ಕುಟುಂಬದ ಮೂವರು ಆಹ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತ್ನಿಯ ಅನಾರೋಗ್ಯದಿಂದ ಬೇಸತ್ತ ಪತಿಯೊಬ್ಬ, ಪತ್ನಿ ಹಾಗೂ ಮಗನಿಗೆ ವಿಷ ಕುಡಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾರಿ ಚಾಲಕ ಕೃಷ್ಣನಾಯ್ಕ (35) ಪತ್ನಿ ಸುಮಾ (30) ಹಾಗೂ ಧ್ರುವ (6) ಮೃತಪಟ್ಟವರಾಗಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲು ಆಗದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆರ್ಎಂಸಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.



