ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ 2021-22 ನೇ ಸಾಲಿನಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಅನುಷ್ಠಾನಗೊಳುಸುತ್ತಿರುವ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ/ಅತಿ ಸಣ್ಣ ಹಾಗೂ ಇತರೆ ಹಿಂದುಳಿದ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ,ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶದ ವರೆಗೆ ಸಹಾಯಧನವನ್ನು ನೀಡಲಾಗುವುದು ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ಸೂಕ್ಮ ನೀರಾವರಿ ಘಟಕ ಅಳವಡಿಸಿದ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ/ಅತಿ ಸಣ್ಣ ರೈತ ಫಲಾನುಭವಿಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಶೇ 90% ರಷ್ಟು (ಸೀಲಿಂಗ್ ಲಿಮಿಟ್ ರಂತೆ) ಮತ್ತು 2 ಹೆಕ್ಟೇರ್ ಮೇಲ್ಪಟ್ಟು ( ಗರಿಷ್ಟ 5 ಹೆಕ್ಟೇರ್) ಶೇ. 45 ರಷ್ಟು ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಸಂಪರ್ಕಿಸಲು ಕೋರಿದೆ. 2021-22ನೇ ಸಾಲಿನಲ್ಲಿ ನಿಗದಿ ಪಡಿಸಿರುವ ಅರ್ಥಿಕ ಗುರಿಯ ಅನುಸಾರ ಆಯಾ ಅರ್ಹ ರೈತರ ಅರ್ಜಿ ಸ್ವೀಕರಿಸಲಾಗುವುದು. ಅರ್ಜಿಯನ್ನು 21-09-2021 ರಿಂದ ಸ್ವೀಕರಿಸಲಾಗುವುದು.



