Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪಘಾತ ಪರಿಹಾರ ನೀಡದ ಎರಡು ಸರ್ಕಾರಿ ಬಸ್ ಜಪ್ತಿ

ದಾವಣಗೆರೆ

ದಾವಣಗೆರೆ: ಅಪಘಾತ ಪರಿಹಾರ ನೀಡದ ಎರಡು ಸರ್ಕಾರಿ ಬಸ್ ಜಪ್ತಿ

ದಾವಣಗೆರೆ: ಅಪಘಾತ ಪರಿಹಾರ ನೀಡದ ಹಿನ್ನೆಲೆ ನ್ಯಾಯಾಲಯದ ಆದೇಶದ ಮೇರೆಗೆ ಎರಡು ಸರ್ಕಾರಿ ಬಸ್​ಗಳನ್ನ ಜಪ್ತಿ ಮಾಡಲಾಗಿದೆ.

ದಾವಣಗೆರೆ ಬಸ್ ನಿಲ್ದಾಣದಲ್ಲಿ 2 ಕೆಎಸ್‌ಆರ್​ಟಿಸಿ ಬಸ್​ಗಳನ್ನು ಇಂದು ಜಪ್ತಿ ಮಾಡಲಾಗಿದೆ. 2009ರ ಆಗಸ್ಟ್ 8ರಂದು ಕೆಎಸ್‌ಆರ್​ಟಿಸಿ ಬಸ್ ಅಪಘಾತವಾಗಿತ್ತು. ಸುದೀಪ್ ಎಂಬುವವರು ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಕಾಲು ಕಳೆದುಕೊಂಡಿದ್ದ ಸುದೀಪ್​ಗೆ ಪರಿಹಾರ ನೀಡುವಂತೆ ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡದ ಹಿನ್ನೆಲೆ ಬಸ್​ಗಳನ್ನು ಇದೀಗ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ದಾವಣಗೆರೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು‌. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ಮಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಡಿಪೋದಿಂದ 41,11,200 ರೂ. ಪರಿಹಾರಕ್ಕೆ ಸೂಚನೆ ನೀಡುವಂತೆ ಸೂಚಿಸಿತ್ತು. ಇಲ್ಲಿವರೆಗೂ ಕಾಲು ಕಳೆದುಕೊಂಡ ವ್ಯಕ್ತಿಗೆ ಪರಿಹಾರ ನೀಡದ ಹಿನ್ನೆಲೆ ಬೆಳಗಾವಿ ಡಿಪೋಗೆ ಸೇರಿದ ಎರಡು ಬಸ್​ಗಳನ್ನ ಜಪ್ತಿ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top