ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 1 ಲಕ್ಷ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.
ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟಂಬಕ್ಕೆ 1 ರೂ ಲಕ್ಷ ಪರಿಹಾರ ನೀಡುವುದಾಗಿ ರಾಜ್ಯದ ನಿಕಟಪೂರ್ವ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದರು. ಇದೀಗ ಸರ್ಕಾರ ಸೆ. 23 ರಂದು ಆದೇಶ ಹೊರಡಿಸಿದ್ದು, ಅರ್ಹ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸರ್ಕಾರ ಆದೇಶಿಸಿದೆ.
ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ ವಾರಸುದಾರರಾಗಿದ್ದರೆ, ಕೋವಿಡ್19 ಮರಣ ಪರಿಹಾರ ಧನವನ್ನು ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ ಪಿಡಿ ಖಾತೆಯಿಂದ ಚೆಕ್ ಮೂಲಕ ವಿತರಿಸಲು ಆದೇಶ ಹೊರಡಿಸಿದೆ.



