ದಾವಣಗೆರೆ: ಪ್ರತಿ ವರ್ಷದಂತೆ ಈ ಬಾರಿಯೂ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್ ನಿಂದ ಸಂಭ್ರಮದ ನವರಾತ್ರಿ ಉತ್ಸವ ಆಚರಿಸಲು ನಿರ್ಧರ ಕೈಗೊಳ್ಳಲಾಯಿತು.
ಈ ಬಗ್ಗೆ ಭಾನುವಾರ ದೇವಸ್ಥಾನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆ ಬಳಿಕ ಟ್ರಸ್ ಗೌರವ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಮಾತನಾಡಿ, ಕೋವಿಡ್ ಮಾರ್ಗಸೂಚಿ ಅನ್ವಯ ಉತ್ಸವ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರಭದಲ್ಲಿ ಟ್ರಸ್ಟ್ ಯಜಮಾನ ಮೋತಿ ವೀರಣ್ಣ, ಜೋಗಪ್ಪರ ಕೊಟ್ರಬಸಪ್ಪ, ಹನುಮಂತರಾವ್ ಸಾವಂತ್ , ಗೌಡ್ರು ಚನ್ನಬಸಪ್ಪ, ಎಚ್.ಬಿ. ಗೋಣೆಪ್ಪ , ಸಾಳಂಕಿ ಉಮೇಶ್, ಬಿ.ಕೆ. ರಾಮಕೃಷ್ಣ, ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



