ದಾವಣಗೆರೆ: ಕಳೆದ ಎರಡ್ಮೂರು ದಿನದಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ನಿನ್ನೆ (ಅ.03) 13.06 ಮಿ.ಮೀ. ಸರಾಸರಿ ಮಳೆಯಾಗಿದ್ದು, ಒಟ್ಟು ರೂ.8.10 ಲಕ್ಷ ನಷ್ಟ ಸಂಭವಿಸಿದೆ.
ಚನ್ನಗಿರಿ- 22.75 ಮಿ.ಮೀ, ದಾವಣಗೆರೆ 26.46 ಮಿ.ಮೀ., ಹರಿಹರ 3.40 ಮಿ.ಮೀ., ಹೊನ್ನಾಳಿ 5.70 ಮಿ.ಮೀ., ಜಗಳೂರು 7 ಮಿ.ಮೀ. ನಷ್ಟು ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾ ಮನೆಗಳಿಗೆ ಭಾಗಶ: ಹಾನಿಯಾಗಿದ್ದು, ರೂ. 2.10 ಲಕ್ಷ ಹಾಗೂ 4 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು ರೂ. 1 ಲಕ್ಷ ಸೇರಿದಂತೆ ಒಟ್ಟು 3.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆಗಳಿಗೆ ಭಾಗಶ: ಹಾನಿಯಾಗಿದ್ದು ರೂ.1.20 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.0.30 ಲಕ್ಷ ಒಟ್ಟು ರೂ.1.50 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.1.00 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.00 ಲಕ್ಷ ಮತ್ತು 1 ಕಚ್ಚಾ ಮನೆ ತೀವ್ರಹಾನಿಯಾಗಿದ್ದು ರೂ.1.50 ಲಕ್ಷ. ಒಟ್ಟು 3.50 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹವಾಮಾನ ಇಲಾಖೆ ಇನ್ನು ಎರಡು ದಿನ ಮಳೆಯ ಮುನ್ಸೂಚನೆ ನೀಡಿದ್ದು, ರೈತರ ಎಚ್ಚರಿಕೆ ವಹಿಸಬೇಕಿದೆ.



