ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಾಹಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಬಿಎಸ್ವೈ ಆಪ್ತ ಉಮೇಶ್ ವಾಸವಿದ್ದ ರಾಜಾಜಿನಗರ ಬಾಷ್ಯಂ ಸರ್ಕಲ್ ಬಳಿ ಮೂರಂತಸ್ತಿನ ಮನೆ ಸೇರಿ ಅವರಿಗೆ ಸಂಬಂಧಿಸಿದ 4 ಕಡೆ ಏಕಕಾಲಕ್ಕೆ ಐಟಿ ದಾಳಿಯಾಗಿದೆ. ಬಿಎಸ್ವೈ ಸಿಎಂ ಆಗಿದ್ದಾಗ ಪಿಎ ಆಗಿದ್ದ ಉಮೇಶ್, ಬಿಎಂಟಿಸಿ ಬಸ್ ಕಂಡಕ್ಟರ್ ಕಂ ಡ್ರೈವರ್ ಆಗಿದ್ದರು.ಡೆಫ್ಯುಟೇಷನ್ ಮೇಲೆ ಬಿಎಸ್ವೈ ಆಪ್ತನಾಗಿ ಕೆಲಸ ಮಾಡುತ್ತಿದ್ದ ಉಮೇಶ್ ಬಾಷ್ಯಂ ಸರ್ಕಲ್ ಬಳಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರುಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಮೇಶ್ 2008ರಿಂದಲೂ ಯಡಿಯೂರಪ್ಪ ಜತೆ ಆಪ್ತ ಒಡನಾಡಿಯಾಗಿದ್ದರು. ಕಡತ ವಿಲೇವಾರಿ, ವರ್ಗಾವಣೆ ಕೆಲಸಗಳ ಜತೆಗೆ ನೀರಾವರಿ ಇಲಾಖೆಯ ವ್ಯವಹಾರವನ್ನು ಉಮೇಶ್ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಯಡಿಯೂರಪ್ಪ ಮಾತ್ರವಲ್ಲ, ಸಂಸದ ರಾಘವೇಂದ್ರ, ಬಿ.ವೈ. ವಿಜಯೇಂದ್ರ ಅವರಿಗೂ ಪಿಎ ಕೆಲಸ ಮಾಡುತ್ತಿದ್ದರು.