ದಾವಣಗೆರೆ: ದಾವಣಗೆರೆ ಕಡೆಯಿಂದ ಚಿತ್ರದುರ್ಗದ ಕಡೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 239.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿಯಲ್ಲಿ ಒಟ್ಟು 3.59 ಲಕ್ಷ ಮೌಲ್ಯದ 239.5 ಕ್ವಿಂಟಲ್ ಅಕ್ಕಿಯನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಅಕ್ಕಿ ಸಾಗಾಟ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ಡಿವೈಎಸ್ಸಿ ಬಸವರಾಜ್ ಬಿ.ಎಸ್ ಹಾಗೂ ವಿದ್ಯಾನಗರ ಪಿಎಸ್ ಐ ಪ್ರಸಾದ್, ಆಹಾರ ನಿರೀಕ್ಷಕರಾದ ಶಬಾನ ಪರ್ವೀನ್ ಮತ್ತು ಸಿಬ್ಬಂದಿ ದಾಳಿ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.



