ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ನಾಳೆ ಹೊರ ಬೀಳಲಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳಲ್ಲಿ ಫುಲ್ ಟೆನ್ಷನ್ ಶುರುವಾಗಿದೆ. ಇನ್ನು ಮತದಾರರು ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.
ಈ ಬಾರಿ ಬಿಜೆಪಿ ಪಾಲಿಕೆ ಗದ್ದುಗೆ ಹಿಡಿಯುವ ಲೆಕ್ಕಾಚಾರದಲ್ಲಿ ಕಣಕ್ಕೆ ಇಳಿದಿದೆ. ಇನ್ನು ಕಾಂಗ್ರೆಸ್ ಕಳೆದ ಬಾರಿಯಂತೆ ಈ ಬಾರಿಯೂ ಕಮಾಲ್ ಮಾಡುವ ಉತ್ಸಾಹದಲ್ಲಿದೆ. ಇನ್ನು ಜೆಡಿಎಸ್ ಮತ್ತು ಸಿಪಿಐ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಮೂರ್ನಾಲ್ಕು ಸೀಟ್ ಗಳಿಗೆ ಕಮಾಲ್ ಮಾಡಿದರೂ ಅಚ್ಚರಿ ಪಡಬೇಕಿಲ್ಲ. ಕಾಂಗ್ರೆಸ್ ಜಿಲ್ಲಾ ವರಿಷ್ಠ ಶಾಮನೂರು ಶಿವಶಂಕರಪ್ಪ ಅವರು ಕೂಡ ಫಲಿತಾಂಶ ಬಂದ ಮೇಲೆ ನೋಡಿ..! ಎನ್ನುವ ಮೂಲಕ ಕತೂಹಲ ಇನ್ನಷ್ಟು ಹೆಚ್ಚುವಂತೆ ಮಾಡಿದ್ದಾರೆ.
ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೇ ನೇರ ಸ್ಪರ್ಧೆ ಏರ್ಪಟ್ಟಿದ್ದರೂ, ಪಕ್ಷೇತರರು ಮತ್ತು ಜೆಡಿಎಸ್, ಸಿಪಿಐ ಪಕ್ಷವನ್ನು ಕಡೆಗಣಿಸುವಂತಿಲ್ಲ. ಕಳೆದ ಬಾರಿ ಕಾಂಗ್ರೆಸ್ 41 ವಾರ್ಡ್ ಗಳಲ್ಲಿ 39 ಸೀಟು ಗೆಲ್ಲುವ ಮೂಲಕ ಭಾರೀ ದೊಡ್ಡ ಮಟ್ಟದ ಗೆಲುವು ಸಾಧಿಸಿತ್ತು. ಬಿಜೆಪಿ, ಸಿಪಿಐ ತಲಾ 1 ಸೀಟಿಗೆ ಮಾತ್ರ ತೃಪ್ತಿ ಪಟ್ಟಿದ್ದರು. ಈ ಬಾರಿ ವಾರ್ಡ್ ಮರು ವಿಂಗಡನೆಯಾಗಿದ್ದು, 41 ವಾರ್ಡ್ ನಿಂದ 45 ವಾರ್ಡ್ ಗಳಾಗಿ ಬದಲಾಗಿದ್ದು, ಮೂರು ಪಕ್ಷಗಳಿಗೂ ಸತ್ವ ಪರೀಕ್ಷೆಯಾಗಿದೆ.
ಕಳೆದ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಆದರೆ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಹಿನ್ನೆಲೆ ಬಿಜೆಪಿ ಪ್ಲೆಸ್ ಪಾಯಿಂಟ್ ಆಗಲಿದೆ. ಇನ್ನು ಕಾಂಗ್ರೆಸ್ ಆಡಳಿತ ಪಕ್ಷವಾಗಿದ್ದರಿಂದ ವರದಾನವಾಗಲಿದೆ. ಒಟ್ಟನಲ್ಲಿ ಈ ಸೋಲು ಗೆಲುವಿನ ಲೆಕ್ಕಚಾರದಲ್ಲಿ ಕೊನೆಯಲ್ಲಿ ಗೆಲ್ಲುವವರು ಯಾರು ಎಂಬುದು ಸದ್ಯದ ಪ್ರಶ್ನೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದ್ದರೆ, ನಾಳೆ ಮಧ್ಯಾಹ್ನದ ವರೆಗೆ ನೀವು ಕೂಡ ಕಾಯಲೇ ಬೇಕು..
-ಮುನಿಕೊಂಡಜ್ಜಿ



