ದಾವಣಗೆರೆ: ನಾಳೆ ಬೃಹತ್ ಲಸಿಕಾ ಮೇಳ; 46,800 ಡೋಸ್ ಲಸಿಕೆ ನೀಡಿಕೆ ಗುರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ಅ. 22 ರಂದು ದಾವಣಗೆರೆ ತಾಲ್ಲೂಕಿನಲ್ಲಿ ಬೃಹತ್ ಲಸಿಕಾ ಮೇಳ ಆಯೋಜಿಸಲಾಗಿದ್ದು, ಅಂದು ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಮಹಾನಗರಪಾಲಿಕೆಯ ಎಲ್ಲ 45 ವಾರ್ಡ್‍ಗಳು, ತಾಲ್ಲೂಕಿನ 43 ಗ್ರಾಮ ಪಂಚಾಯತ್‍ಗಳು, ಪ್ರಾಥಮಿಕ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 46800 ಡೋಸ್ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

ಸರ್ಕಾರವು ಕೋವಿಡ್ ಸೋಂಕು ತಡೆಗಟ್ಟುವ ದಿಸೆಯಲ್ಲಿ ಬೃಹತ್ ಲಸಿಕಾ ಮೇಳ ಆಯೋಜಿಸಿ, ಹೆಚ್ಚಿನ ಜನರಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ 46800 ಡೋಸ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ವ್ಯಕ್ತಿಗಳು ಮೊದಲ ಹಾಗೂ ಎರಡನೆ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಲಸಿಕೆ ಪಡೆಯಲು ತೊಂದರೆಯಾಗದ ರೀತಿಯಲ್ಲಿ ಇದೇ ಮೊದಲ ಬಾರಿಗೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಉಪಕೇಂದ್ರಗಳು, ಜಿಲ್ಲಾ ಆಸ್ಪತ್ರೆ ಅಲ್ಲದೆ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‍ನಲ್ಲಿಯೂ ನಿಗದಿತ ಸ್ಥಳದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ.

ದಾವಣಗೆರೆಯ 09 ನಗರ ಆರೋಗ್ಯ ಉಪಕೇಂದ್ರಗಳಲ್ಲಿ ಒಟ್ಟು 3800 ಡೋಸ್ ಕೋವಿಶೀಲ್ಡ್ ಹಾಗೂ 6400 ಡೋಸ್ ಕೋವ್ಯಾಕ್ಸಿನ್. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 400 ಡೋಸ್ ಕೋವ್ಯಾಕ್ಸಿನ್. ಎಲ್ಲ 43 ಗ್ರಾಮ ಪಂಚಾಯತ್‍ಗಳಿಗೆ ತಲಾ 200 ರಂತೆ ಒಟ್ಟು 8600 ಡೋಸ್ ಕೋವಿಶೀಲ್ಡ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಟ್ಟು 5100 ಡೋಸ್ ಕೋವಿಶೀಲ್ಡ್, 09 ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ 45 ವಾರ್ಡ್‍ನಲ್ಲಿ ತಲಾ 500 ಡೋಸ್ ನಂತೆ ಒಟ್ಟು 22500 ಡೋಸ್ ಸೇರಿದಂತೆ ಒಟ್ಟಾರೆ 46800 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅ. 22 ರಂದು ನಿಗದಿತ ಸ್ಥಳದಲ್ಲಿ ನೀಡಲಾಗುವುದು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಭಾವಿಸಿ, ಲಸಿಕೆ ಪಡೆಯಲು ನಿರ್ಲಕ್ಷ್ಯ ತೋರಬಾರದು. ಎರಡೂ ಡೋಸ್ ಲಸಿಕೆ ಪಡೆದಲ್ಲಿ ಮಾತ್ರ ಕೋವಿಡ್‍ನಿಂದ ರಕ್ಷಣೆ ಪಡೆಯಲು ಸಾಧ್ಯವಾಗಲಿದ್ದು, ಇದುವರೆಗೂ ಲಸಿಕೆ ಪಡೆಯದೇ ಇರುವ 18 ವರ್ಷ ಮೇಲ್ಪಟ್ಟವರು ಮೊದಲನೆ ಡೋಸ್ ಹಾಗೂ ಈಗಾಗಲೆ ಮೊದಲ ಡೋಸ್ ಪಡೆದು ನಿಗದಿತ ಅವಧಿ ಪೂರ್ಣಗೊಂಡವರು ಎರಡನೆ ಡೋಸ್ ಲಸಿಕೆಯನ್ನು ತಪ್ಪದೆ ಪಡೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *