ಡಿವಿಜಿ ಸುದ್ದಿ, ಹರಪನಹಳ್ಳಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿರುವ ಪ್ರಸಿದ್ಧ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಬೆಳಗ್ಗೆ ಭಕ್ತರು ಅಗ್ನಿಕುಂಡ ಹಾಯ್ದು ಭಕ್ತಿ ಸಮರ್ಪಿಸಿದರು.

ಮೇಗಳಪೇಟೆಯ ಗುಗ್ಗಳ ವೀರಭದ್ರೇಶ್ವರ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ವೀರಭದ್ರೇಶ್ವರ ದೇವರ ಉತ್ಸವ ಮೂರ್ತಿಯನ್ನು ನಂದಿಕೋಲು, ಸಮಾಳ ಸೇರಿದಂತೆ ಸಕಲ ವಾದ್ಯಗಳೊಂದಿಗೆ ಹಳೆ ಬಸ್ಸು ನಿಲ್ದಾಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ಕರೆ ತರಲಾಯಿತು.
ನೂರಾರು ಭಕ್ತರು ಸಾಲಾಗಿ ಬಂದು ಅಗ್ನಿ ಕುಂಡದಲ್ಲಿ ಹಾಯ್ದರು. ಸುಮಾರು ಒಂದುವರೆ ಗಂಟೆಗಳ ಕಾಲ ಭಕ್ತರು ಅಗ್ನಿಕುಂಡ ಹಾಯ್ದರು. ವೀರಣ್ಣ ದೊರೆಯೇ ನಿನಗ್ಯಾರು ಸರಿಯೇ.. ಸರಿಸರಿ ಅಂದವರ ಹಲ್ಲು ಮುರಿಯೇ ಬಹುಪಾರಾಕ್ ಎಂದು ಭಕ್ತರು ಘೋಷವಾಕ್ಯ ಮೊಳಗಿಸಿದರು. ಸ್ಥಳೀಯ ನ್ಯಾಯಲಯದ ನ್ಯಾಯಧೀಶರಾದ ಉಂಡಿ ಮಂಜುಳಾ ಶಿವಪ್ಪ,ಮುಖಂಡರಾದ ಶಶಿಧರ ಪೂಜಾರ್, ಪಾಟೀಲ್ ಬೆಟ್ಟನಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



