Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರ ಖರೀದಿಸಿರುವ ಜಮೀನಿಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಅವಕಾಶ

davangerer bord

ದಾವಣಗೆರೆ

ದಾವಣಗೆರೆ: ಸರ್ಕಾರ ಖರೀದಿಸಿರುವ ಜಮೀನಿಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಅವಕಾಶ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನುಗಳನ್ನು ಖರೀದಿಸಲು ಪ್ರಸ್ತಾವನೆ ಸ್ವೀಕರಿಸಲಾಗಿದ್ದು, ಜಮೀನಿಗೆ ಸಂಬಂಧಿಸಿದ ಆಕ್ಷೇಪಣೆಗಳಿದ್ದಲ್ಲಿ 7 ದಿನಗಳ ಒಳಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಆಕ್ಷೇಪಣೆ ಸಲ್ಲಿಸಬಹುದು.

ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ವಾಸಿ ವಿರೂಪಾಕ್ಷಯ್ಯ ಬಿನ್ ಬಸಯ್ಯ ಇವರ ಜಮೀನು ಗೌಡಗೊಂಡನಹಳ್ಳಿ ಸರ್ವೆ ನಂ. 60/8 ರಲ್ಲಿ 2.00 ಎಕರೆ. ಜಿಟ್ಟಿನಕೆರೆ ವಾಸಿ ಸುಮಂಗಲ ತಂದೆ ನಾಗರಾಜಯ್ಯ ಹೆಚ್.ಎಂ ಇವರ ಜಮೀನು ಗೌಡಗೊಂಡನಹಳ್ಳಿ ಸರ್ವೆ ನಂ.9/1 ರಲ್ಲಿ 2.00 ಎಕರೆ. ಹೊನ್ನಾಳಿ ತಾಲ್ಲೂಕು ಬೆನಕನಹಳ್ಳಿ ವಾಸಿ ಹಾಲಪ್ಪ ಬಿನ್ ವೀರಭದ್ರಪ್ಪ ಇವರ ಜಮೀನು ಗಡೇಕಟ್ಟೆಯ ಸರ್ವೆ ನಂ.33/3 ರಲ್ಲಿ 4.00 ಎಕರೆ. ದಾವಣಗೆರೆ ತಾಲ್ಲೂಕು ಗುಡಾಳು ಗ್ರಾಮದ ವಾಸಿ ಸಿ. ರುದ್ರೇಶ್ ಬಿನ್ ಚನ್ನಪ್ಪ ಇವರ ಜಮೀನು ಗುಡಾಳು ಸರ್ವೆ ನಂ. 217/2 ರಲ್ಲಿ 2.00 ಎಕರೆ. ಸುಮ ಕೋಂ ಭರಮಪ್ಪ ಎಸ್.ವಿ. ಬಡಾವಣೆ ದಾವಣಗೆರೆ ವಾಸಿ ಇವರ ಜಮೀನು ದಾವಣಗೆರೆ ತಾಲ್ಲೂಕಿನ ಕಂದನಕೋವಿ ಗ್ರಾಮದ ಸರ್ವೆ ನ.39/1 ರಲ್ಲಿ, 1.00 ಎಕರೆ 29 ಗುಂಟೆ ಜಮೀನನ್ನು ಖರೀದಿಸಲು ಪ್ರಸ್ತಾವನೆ ಸ್ವೀಕರಿಸಲಾಗಿದೆ.

ಮೇಲ್ಕಂಡ ಜಮೀನುಗಳಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ 7 ದಿನಗಳ ಒಳಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08192-233309ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top