ದಾವಣಗೆರೆ: ನಗರದ ವಿದ್ಯಾನಗರ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.26 ರಂದು ಬೆಳಗ್ಗೆ 10 ರಿಂದ ಸಂಜೆ 05ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ತರಳಬಾಳು ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ ಸರ್ಕಾರಿ ಐ.ಟಿ.ಐ. ಕಾಲೇಜು, ಹದಡಿರಸ್ತೆ, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಹಾಗೂ ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಚಿಕ್ಕಮ್ಮಣ್ಣಿ ದೇವರಾಜ್ಅರಸ್ ಬಡಾವಣೆ, ಜಗಜೀವನ್ ಭೀಮ ನಗರ, ಸರಸ್ವತಿ ಬಡಾವಣೆ, ಜಯನಗರ ಎ ಮತ್ತು ಬಿ ಬಡಾವಣೆ, ಲಕ್ಷ್ಮಿ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.