Connect with us

Dvgsuddi Kannada | online news portal | Kannada news online

ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆಯಾಗಲಿದೆ: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ

byrathi bsavaraja

Home

ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆಯಾಗಲಿದೆ: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ

ದಾವಣಗೆರೆ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ಡಾಲರ್ ಬೆಲೆಯ ಏರಿಳಿ ಆರಿಕೆ ಆಗುತ್ತಿದೆ. ಇದರಿಂದ ತೈಲ ಬೆಲೆ ಹೆಚ್ಚಳವಾಗಿದೆ.  ಮುಂದಿನ ದಿನಗಳಲ್ಲಿ  ತೈಲ ಬೆಲೆ ಕಡಿಮೆ ಆಗಲಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್, ಸಿಂದಗಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮುಂದಿನ ಚುನಾವಣಾ ಫಲಿತಾಂಶದ ದಿಕ್ಸೂಚಿಯಲ್ಲ. ನಮಗೆ ಸಂಪೂರ್ಣ ಬಹುಮತ ಇದೆ. ಗೆದ್ದೇ ಗೆಲ್ಲುತ್ತೇವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ ಎಂದು ವಿಪಕ್ಷಗಳು ಹೇಳುತ್ತಿವೆ. ನಾಳೆ ಬೆಳಗ್ಗೆ ಎಲ್ಲವೂ ಗೊತ್ತಾಗಲಿದೆ ಎಂದರು.

ನನಗೆ ಈವರೆಗೂ ಬಿಟ್ ಕಾಯಿನ್ ಏನು ಎಂಬುದು ಗೊತ್ತೇ ಇಲ್ಲ. ಆ ಬಗ್ಗೆ ಮಾಹಿತಿಯೂ ಇಲ್ಲ. ಬಿಟ್‌ಕಾಯಿನ್ ಪ್ರಕರಣವನ್ನ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿಯವರೇ ಹೇಳಿದ್ದಾರೆ ಎಂದು ತಿಳಿಸಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top