Connect with us

Dvgsuddi Kannada | online news portal | Kannada news online

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಮುನ್ನಡೆ; ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿ ಮುಖಭಂಗ..!

ಪ್ರಮುಖ ಸುದ್ದಿ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಮುನ್ನಡೆ; ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿ ಮುಖಭಂಗ..!

ಹಾವೇರಿ: ಹಾನಗಲ್ ಕ್ಷೇತ್ರದ ವಿಧಾನಸಭಾ  ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಬಿಜೆಪಿ ಸೋಲಿನ ಭೀತಿ ಎದುರಾಗಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತವರು ಜಿಲ್ಲೆಯಲ್ಲಿಯೇ ಸೋಲಿನ ಮುಖಭಂಗವಾಗುವ ಸಾಧ್ಯತೆ ಹೆಚ್ಚಿದೆ.

15 ನೇ ಸುತ್ತು ಮುಕ್ತಾಯಕ್ಕೆ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 68,543 ಮತಗಳನ್ನು ಪಡೆದರೆ ಬಿಜೆಪಿಯ ಶಿವರಾಜ್ ಸಜ್ಜನರ 62,228  ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ನಿಯಾಜ್ ಶೇಖ್ 714 ಮತಗಳನ್ನು ಗಳಿಸಿದ್ದಾರೆ.
ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ತೆರಳಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿ,  ಹಾನಗಲ್‌ನಲ್ಲಿ ಹಣ ಬಲ ಸೋತಿದೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಆಡಳಿಯ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದ ವಾಗ್ದಾಳಿ ನಡೆಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top