ಮುಂಬೈ ಕರ್ನಾಟಕ ಇನ್ನು `ಕಿತ್ತೂರು ಕರ್ನಾಟಕ’; ಸಂಪುಟದಲ್ಲಿ ಮಹತ್ವದ ನಿರ್ಧಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ,  ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.  ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘ ಹಾಗೂ ಧಾರವಾಡ-ಹಾವೇರಿ ಹಾಲು ಉತ್ಪಾದಕರ ಸಂಘಗಳನ್ನು ಪ್ರತ್ಯೇಕಿಸಲು ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದರು.

ನೇಕಾರ ಸಮುದಾಯಕ್ಕೆ 376 ಕೋಟಿ ವಿಶೇಷ ಪ್ಯಾಕೇಜ್ ನೀಡಲು ತೀರ್ಮಾನಿಸಲಾಗಿದೆ. ಹೊಸಪೇಟೆ-ಬಳ್ಳಾರಿ ರಸ್ತೆ ಕಾಮಗಾರಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.  ನೂತನ ಮರಳು ನೀತಿ ಜಾರಿಗೆ ತಂದು  ಶೇ.25ರಷ್ಟು ಗ್ರಾಮ ಪಂಚಾಯಿತಿಗೆ ಅನುಮತಿ, ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಮರಳು ತೆಗೆಯಲು ಅವಕಾಶ ನೀಡಲಾಗಿದೆ.  ಈ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಅಧಿವೇಶನದ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತಿಳಿಸಲಾಗುವುದು ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *