ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರು ಟೀಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗದರು. ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ವಿರೋಧಿ ಪಟ್ಟ ಕಟ್ಟಿ ರಾಜ್ಯದ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಬಿಜೆಪಿ ಮುಂದಾಗಿದೆ. ಹಾನಗಲ್ ಉಪಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಯವರು ಈ ರೀತಿಯಾಗಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಗೌಡ್ರು ಚನ್ನಬಸಪ್ಪ, ಎಲ್.ಎಂ.ಎಚ್.ಸಾಗರ್, ಕೆ.ಜಿ.ಶಿವಕುಮಾರ್, ಅನಿತಾ ಬಾಯಿ, ಸುಧಾ ಹಿಟ್ಟುಗುಡಿ ಮಂಜುನಾಥ್, ನಾಗರಾಜ್ ನಾಯ್ಕ್, ಡಾ.ವೈ.ರಾಮಪ್ಪ, ರಂಗನಾಥ್, ಜಮ್ಮೆನಹಳ್ಳಿ ನಾಗರಾಜ್, ಚನ್ನಬಸವಣ್ಣ, ನೀಲಗಿರಿಯಪ್ಪ, ಅಬ್ದುಲ್ ಜಬ್ಬಾರ್, ಅಣ್ಣಪ್ಪ, ದ್ರಾಕ್ಷಣಮ್ಮ, ರಾಜೇಶ್ವರಿ, ಜಯಶ್ರೀ, ಗೀತಾ ಚಂದ್ರಶೇಖರ್, ಆಶಾ ಮುರುಳಿ, ಮಂಗಳಮ್ಮ, ಗೀತಾ ರಾಜ್ಕುಮಾರ್, ಬಿ.ಎಂ.ಈಶ್ವರಪ್ಪ, ಶುಭಾ ಮಂಗಳ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.