ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪೊಲೀಸರು ನಾಲ್ವರು ಅಡಿಕೆ ಕಳ್ಳತರನ್ನು ಬಂಧಿಸಿದ್ದು, 3 ಲಕ್ಷ ಮೌಲ್ಯದ 7.85 ಕ್ವಿಂಟಾಲ್ ಒಣ ಅಡಿಕೆ ವಶಕ್ಕೆ ಪಡೆಯಲಾಗಿದೆ.
ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯ ಗ್ರಾಮದ ಸತೀಶ್ ಎಂಬುವರು ಮನೆ ಮುಂದೆ ಒಣ ಹಾಕಿದ್ದ 5.5 ಕ್ವಿಂಟಾಲ್ ಅಡಿಕೆ ಕಳ್ಳತನವಾಗಿದೆ ಎಂದು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಹೊನ್ನಾಳಿ ಸಿಪಿಐ ದೇವರಾಜ್ ಟಿ.ವಿ, ಪಿಎಸ್ ಐ ಬಸವರಾಜ್ ಬಿರಾದರ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ.
ಆರೋಪಿಗಳ ವಿರುದ್ಧ ಸಂತೆಬೆನ್ನೂರು, ಹೊನ್ನಾಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 3 ಲಕ್ಷ ಮೌಲ್ಯದ 7.85 ಕ್ವಿಂಟಾಲ್ ಅಡಿಕೆ ವಶಕ್ಕೆ ಪಡೆಯಲಾಗಿದೆ.



