ಚಿತ್ರದುರ್ಗ: ವಾಕಿಂಗ್ ಮುಗಿಸಿ ಮನೆಗೆ ಬಂದು ಹೃದಯಾಘಾತದಿಂದ ಡಿವೈಎಸ್ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ವಾಕಿಂಗ್ ಮುಗಿಸಿ ಮನೆಗೆ ಬಂದು, ದಿಢೀರ್ ಕುಸಿದು ಬಿದ್ದಿದ್ದ ಡಿವೈಎಸ್ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್ಬಿ ಮತ್ತು ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್ ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್ಪಿ ಜಿ. ರಾಧಿಕಾ ಭೇಟಿ ನೀಡಿದ್ದಾರೆ.



