Connect with us

Dvgsuddi Kannada | online news portal | Kannada news online

ದಾವಣಗೆರೆ: ದಿ.ಪಾರ್ವತಮ್ಮ ಸ್ಮರಣಾರ್ಥ ನ.25 ರಿಂದ 28 ವರೆಗೆ ಎಸ್.ಎಸ್. ಶಾಮನೂರು ಡೈಮಂಡ್ ಕ್ರಿಕೆಟ್ ಟೂರ್ನಿ

ss cricket cup

ಪ್ರಮುಖ ಸುದ್ದಿ

ದಾವಣಗೆರೆ: ದಿ.ಪಾರ್ವತಮ್ಮ ಸ್ಮರಣಾರ್ಥ ನ.25 ರಿಂದ 28 ವರೆಗೆ ಎಸ್.ಎಸ್. ಶಾಮನೂರು ಡೈಮಂಡ್ ಕ್ರಿಕೆಟ್ ಟೂರ್ನಿ

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಸಹಯೋಗದೊಂದಿಗೆ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸವಿನೆನಪಿಗಾಗಿ ನ.25ರಿಂದ 28ರ ವರೆಗೆ ನಗರದಲ್ಲಿ ರಾಷ್ಟ್ರ ಮಟ್ಟದ ಎಸ್.ಎಸ್. ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್  ಟೆನ್ನಿಸ್‌ ಬಾಲ್ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದೆ.

ಈ ಬಗ್ಗೆ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,   ಮೂರು ದಿನಗಳ ಕಾಲ ನಗರದ ಪ್ರೌಢಶಾಲಾ ಮೈದಾನದಲ್ಲಿ ನಡೆಯುವ ಈ ಕ್ರಿಕೆಟ್ ಟೂರ್ನಿಯಲ್ಲಿ ಕೇರಳ, ಚೆನೈ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಯ 24 ಆಹ್ವಾನಿತ ತಂಡಗಳ 360 ಜನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆಂದು ಎಂದರು.

ಟೂರ್ನಿ ವಿಜೇತರಿಗೆ ಪ್ರಥಮ ಬಹುಮಾನ 3,55,555 ರೂ. ಹಾಗೂ ಶಾಮನೂರು ಡೈಮಂಡ್ ಕಪ್, ದ್ವಿತೀಯ ಬಹುಮಾನವಾಗಿ 2,55,555 ರೂ ಹಾಗೂ ಶಿವಗಂಗಾ ಕಪ್ ಮತ್ತು ತೃತೀಯ ಬಹುಮಾನವಾಗಿ 1,25,555 ರೂ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೆ, ಉತ್ತಮ ಆಲ್‌ ರೌಂಡರ್‌ಗೆ ಹೀರೋ ಹೋಂಡಾ ಬೈಕ್ ನೀಡಲಾಗುವುದು. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳಿಗಾಗಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಪಂದ್ಯಾವಳಿ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ಮೂರನೇ ತೀರ್ಪುಗಾರರ ವ್ಯವಸ್ಥೆ ಸಹ ಮಾಡಲಾಗಿದ್ದು, ಪಂದ್ಯಗಳನ್ನು ಯೂ ಟ್ಯೂಬ್‌ನಲ್ಲಿ ನೇರಪ್ರಸಾರ ಮಾಡಲಾಗುವುದು.

ಟೂರ್ನಿಯಲ್ಲಿ ಪೊಲೀಸ್, ಪತ್ರಕರ್ತರ, ವರ್ತಕರ, ಜಿಲ್ಲಾಡಳಿತ, ಮಹಾನಗರ ಪಾಲಿಕೆ ಸದಸ್ಯರ, ವಕೀಲರ ತಂಡಗಳ 6 ಅಫಿಶಿಯಲ್ ಕಪ್ ಪಂದ್ಯಗಳನ್ನು ಆಡಿಸಲಾಗುವುದು. ಈ ಪಂದ್ಯಾವಳಿಗೆ ಅಂದಾಜು 25ರಿಂದ 30 ಲಕ್ಷ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ, ಸಹ ಕಾರ್ಯದರ್ಶಿ ಜಯಪ್ರಕಾಶ ಗೌಡ, ಸುರೇಶ್ ಪಾಟೀಲ್, ಚಂದ್ರು, ಆಕಾಶ್, ರಾಘವೇಂದ್ರ, ಯುವರಾಜ ಉಪಸ್ಥಿತರಿದ್ದರು.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top