Connect with us

Dvgsuddi Kannada | online news portal | Kannada news online

ದಾವಣಗೆರೆ: 3.5 ಕೆಜಿ ನಕಲಿ ಬಂಗಾರ ಮಾರಾಟ ಮಾಡುತ್ತಿದ್ದ 5 ಆರೋಪಿಗಳ ಬಂಧನ

fake gold

ದಾವಣಗೆರೆ

ದಾವಣಗೆರೆ: 3.5 ಕೆಜಿ ನಕಲಿ ಬಂಗಾರ ಮಾರಾಟ ಮಾಡುತ್ತಿದ್ದ 5 ಆರೋಪಿಗಳ ಬಂಧನ

ದಾವಣಗೆರೆ: ನಗರದ ಜೆ.ಎಚ್.  ಪಟೇಲ್ ಬಡಾವಣೆಯ ಸ್ಟೇಡಿಯಂ ಹತ್ತಿರ ನಕಲಿ ಬಂಗಾರ ಮಾರಾಟ ಮಾಡುತ್ತಿದ್ದ  5  ಆರೋಪಿಗಳನ್ನು ಸಿಇಎನ್ ಅಪರಾಧ ವಿಭಾಗದ  ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 3 ಕೆಜಿ 422 ಗ್ರಾಂ ನಕಲಿ ಬಂಗಾರ, ಕೃತ್ಯಕ್ಕೆ ಉಪಯೋಗಿಸಿದ ಮಾರುತಿ 800 ಕಾರು, 01 ಬೈಕ್  ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಐದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಳಿತ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೈವೈಎಸ್ ಪಬಿ.ಎಸ್. ಬಸವರಾಜ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ವಿಭಾಗದ ವೃತ್ತ ನಿರೀಕ್ಷಕ ಬಿ.ವಿ. ಗಿರೀಶ್ ಸಿಬ್ಬಂದಿಗಳಾದ ಪ್ರಕಾಶ್, ನಾಗರಾಜ, ಗೋವಿಂದರಾಜು, ಲೋಹಿತ್, ಮಲ್ಲಿಕಾರ್ಜುನ, ಮುತ್ತುರಾಜ, ದ್ಯಾಮೇಶ್ ಒಳಗೊಂಡ ತಂಡ ದಾಳಿ ಮಾಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top