ದಾವಣಗೆರೆ: ಕೆರೆಯಲ್ಲಿ ಈಜಲು‌ ಹೋದ ಮೂರು ಬಾಲಕರ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ದೊಡ್ಡಕೆರೆಯಲ್ಲಿ ನಡೆದಿದೆ.

ಆಫಾನ್ (10), ಆಶಿಕ್ (8), ಫಯಾನ್ (8) ಸಾವನ್ನಪ್ಪಿರುವ ಮಕ್ಕಳಾಗಿದ್ದಾರೆ. ನಿನ್ನೆ ಮಧ್ಯಾಹ್ನ ಮನೆಯಿಂದ ಹೊರಗೆ ಆಟವಾಡಲು ಹೋಗಿದ್ದ ಮೂವರು ಬಾಲಕರು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದಾಗ ಕೆರೆಯಲ್ಲಿ ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕೆರೆ ದಡದ ಮೇಲೆ ಮಕ್ಕಳ ಬಟ್ಟೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ಪೋಷಕರು ಮಾಹಿತಿ ನೀಡಿದ್ದಾರೆ.ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಮುಳುಗಿದ್ದ ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಬಾಲಕರ ಮೃತದೇಹಗಳನ್ನು ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *