ದಾವಣಗೆರೆ: ರೋಗಕ್ಕೆ ಔಷಧಿ ನೀಡುವುದಾಗಿ ರೈತರಿಗೆ ವಂಚಿಸುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.
ಮೆಡಿಕಲ್ ಕಾಲೇಜ್ ನಿಂದ ಬಂದಿದ್ದು, ಔಷಧಿ ನೀಡುವುದಾಗಿ ಹೇಳಿ ರೈತರಿಂದ ಹಣ ವಸೂಲಿ ಮಾಡಿ ಪರಾರಿ ಆಗುತ್ತಿದ್ದ ಯುವಕರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಓರ್ವ ರೈತನ ಮಗಳಿಗೆ ಔಷಧಿ ನೀಡುವುದಾಗಿ ಹೇಳಿ ಐದು ಸಾವಿರ ರೂಪಾಯಿ ತೆಗೆದುಕೊಂಡು ಪರಾರಿ ಆಗುತ್ತಿದ್ದ ಸೋಮಶೇಖರ ಹಾಗೂ ಚಿರಂಜೀವಿ ಎಂಬ ಯುವಕರನ್ನು ಸ್ಥಳೀಯರು ಹಿಡಿದಿದ್ದಾರೆ. ಬಸವಾ ಪಟ್ಟಣ ಪೊಲೀಸ್ ಠಾಣೆಗೆ ಯುವಕರನ್ನು ಒಪ್ಪಿಸಲಾಗಿದೆ.



