ಇಂದು ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು (ನ.26)  ದಾವಣಗೆರೆಗೆ ಭೇಟಿ ನೀಡಲಿದ್ದಾರೆ.  ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಂದು ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ ಎಸ್.ಎ.ರವೀಂದ್ರನಾಥ್ ಅವರ ಅಮೃತ ಮಹೋತ್ಸವ ಅಭಿನಂದನಾ ಸಮಾರಂಭ ಮತ್ತು ಎಸ್.ಎ.ಆರ್ ಕುರಿತ ‘ಕೃಷಿ ಕಣ್ಮಣಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗಕ್ಕೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *