ದಾವಣಗೆರೆ: ಕೋವಿಡ್ ಒಮಿಕ್ರಾನ್ ರೂಪಾಂತರಿ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳುತ್ತಿದೆ. ಸದ್ಯ ಯಾವುದೇ ಲಾಕ್ ಡೌನ್ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ರೂಪಾಂತರಿ ಹಿನ್ಬಲೆ ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದಕ್ಷಿಣ ಆಫ್ರಿಕಾದ ಪ್ರವಾಸಿ ಸ್ವಾಬ್ ಸ್ಯಾಂಪಲ್ ವಿಭಿನ್ನವಾಗಿದೆ. ಸ್ವಾಬ್ ಐಸಿಎಂಆರ್ ಕಳುಹಿಸಿಲಾಗಿದೆ. ವರದಿ ನಿರೀಕ್ಷೆಯಲ್ಲಿದ್ದು, ಕೇರಳದಿಂದ ಬಂದ ಪ್ರತಿಯೊಬ್ಬರನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.
ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಬೇಕು. ಕೋವಿಡ್ ನಿಯಮವಳಿ ಪಾಲನೆ ಪಾಲಿಸಬೇಕು. ಶಾಲಾ ಕಾಲೇಜುಗಳಲ್ಲಿ ಕೋವಿಡ್ ಬಗ್ಗೆ ನಿಗಾ ವಹಿಸಲು ಸೂಚಿಸಿದ್ದೇವೆ. ಶಾಲಾ ಕಾಲೇಜಿಗೆ ಲಾಕ್ ಡೌನ್ ಇಲ್ಲ. ಎಲ್ಲರೂ ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರು.



