ದಾವಣಗೆರೆ-ಚಿತ್ರದುರ್ಗ ವಿಧಾನ ಪರಿಷತ್ತು ಚುನಾವಣೆ: ಕಾಂಗ್ರೆಸ್ ಗೆ ಸ್ಥಳೀಯ ಗಂಡಸು ಅಭ್ಯರ್ಥಿ ಸಿಗಲಿಲ್ಲವೇ..?:  ಸಚಿವ ಭೈರತಿ ಬಸವರಾಜ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಚಿತ್ರದುರ್ಗ- ದಾವಣಗೆರೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಸ್ಥಳೀಯ ಗಂಡಸು ಅಭ್ಯರ್ಥಿ ಯಾರು  ಸಿಗಲಿಲ್ಲವೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಿಡಿಕಾರಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೆ.ಎಸ್‌. ನವೀನ್‌ ಪರ ಪ್ರಚಾರ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸ್ಥಳೀಯ ಅಭ್ಯರ್ಥಿಗಳನ್ನು ಕಡೆಗಣಿಸಿ ಬೆಂಗಳೂರಿನಿಂದ ಅಭ್ಯರ್ಥಿಯನ್ನು ಕರೆತಂದು ನಿಲ್ಲಿಸಿದೆ ಎಂದು ವಾಗ್ದಾಳಿ ನಡೆಸಿದರು.

ದಾವಣಗೆರೆ ಅಥವಾ ಚಿತ್ರದುರ್ಗ ಕ್ಷೇತ್ರದಲ್ಲಿ ಸ್ಥಳೀಯರನ್ನು ಚುನಾವಣೆಗೆ ನಿಲ್ಲುವ ಶಕ್ತಿ ಕಾಂಗ್ರೆಸ್‌ ಗೆ ಇಲ್ಲ. ಹೀಗಾಗಿಬೆಂಗಳೂರಿನಿಂದ ಉದ್ಯಮಿಯನ್ನು ಅಭ್ಯರ್ಥಿಯಾಗಿ ಕರೆ ತಂದಿದ್ದಾರೆ. ಹೀಗಾಗಿ  ಗ್ರಾಮ ಪಂಚಾಯಿತಿ ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಸದಸ್ಯರು  ಸ್ವಾಭಿಮಾನ ಕಳೆದುಕೊಳ್ಳದೇ ತಕ್ಕ ಪಾಠ ಕಲಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಬರುತ್ತಿದ್ದ  250 ಗೌರವಧನವನ್ನು ನಮ್ಮ ಸರ್ಕಾರ 1,000 ರೂಪಾಯಿಗೆ  ಹೆಚ್ಚಿಸಿದೆ. ಇದನ್ನು 3,000ಕ್ಕೆ ಹೆಚ್ಚಿಸುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಮನವಿ ಮಾಡಿದ್ದಾರೆ.  ಈ ಬಗ್ಗೆ ಮುಖ್ಯಮಂತ್ರಿಗಳಿಗೆ ನಾನು ಕೂಡ ಮನವಿ ಮಾಡುತ್ತೇನೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *