ದಾವಣಗೆರೆ: ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿಯ ರಾಂಪುರ ಗ್ರಾಮದ ಜಗಳೂರು ರಸ್ತೆಯಲ್ಲಿ ಅನಧಿಕೃತವಾಗಿ ನಕಲಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗ್ರಾಮಸ್ಥರ ಸಹಾಯದಿಂದ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಸಗೊಬ್ಬರದ ಗುಣಮಟ್ಟ ಪರೀಕ್ಷಿಸಲು ವಿಶ್ಲೇಷಣೆಗೆ ಒಳಪಡಿಸಿದ್ದು, ಈ ಕುರಿತು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಮೊಕದ್ಧಮೆಯನ್ನು ದಾಖಲಿಸಲಾಗಿದೆ.
ರೈತರು, ಯಾವುದೇ ರೀತಿಯ ಅನಧಿಕೃತ ರಸಗೊಬ್ಬರ ಮಾರಾಟಗಾರರಿಂದ ಯಾವುದೇ ಕಾರಣಕ್ಕೂ ರಸಗೊಬ್ಬರವನ್ನು ಖರೀದಿಸಬಾರದು. ಹಾಗೂ ಈ ರೀತಿ ಅನಧಿಕೃತ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ದೂ.ಸಂ 8277931106 ಅಥವಾ 8277931207 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



