ಮಕ್ಕಳಿಗೆ ಬಿಸಿ ಊಟದ ಜತೆ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತೆ  ಬಸವಲಿಂಗ ಪಟ್ಟದೇವರು ಶ್ರೀಗಳ ನೇತೃತ್ವದಲ್ಲಿ ಸಿಎಂಗೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭಾಲ್ಕಿ: ಮಧ್ಯಾಹ್ನದ ಬಿಸಿಯೂಟದ ಜತೆ ಮಕ್ಕಳಿಗೆ  ಮೊಟ್ಟೆ ಕೊಡುತ್ತಿರುವ ಕ್ರಮ ಸರಿಯಲ್ಲ. ಕೂಡಲೇ  ಇದನ್ನು ನಿಲ್ಲಿಸುವಂತೆ  ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದೇವರು ಸ್ವಾಮೀಜಿ ಸಿಎಂ ಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಸೋಮವಾರ ನಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ಅವರಿಗೆ ಸನ್ಮಾನಿಸಿ, ಕಲ್ಯಾಣ ಕರ್ನಾಟಕದ ಭಾಗದ ಮಕ್ಕಳಿಗೆ ಮೊಟ್ಟೆ ಕೊಡುವ ಯೋಜನೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಚಿಕ್ಕಮಕ್ಕಳಿಗೆ ಜ್ಞಾನ ಇರುವುದಿಲ್ಲ. ಕೆಲ ಮಕ್ಕಳು ಮೊಟ್ಟೆ ಕೊಡುವುದರಿಂದ ತಾರತಮ್ಯ ಮಾಡಿದಂತಾಗುತ್ತಿದೆ.  ಮಕ್ಕಳಿಗೆ ಇಂತಹ ಭೇದಭಾವ ಮಾಡದೇ ಎಲ್ಲರಿಗು ಇಷ್ಟವಾಗುವ, ಕಾಳು, ಬಾಳೆಹಣ್ಣುಗಳನ್ನು ಕೊಡುವ ಕಾರ್ಯವಾಗಬೇಕು ಎಂದು ಹೇಳಿದರು. ಸಭೆ ನಂತರ ಮೊಟ್ಟೆ ನಿಲ್ಲಿಸುವ ಬೇಡಿಕೆಯ ಮನವಿ ಪತ್ರವನ್ನು ಮುಖ್ಯ ಮಂತ್ರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೇಂದ್ರ ಮಂತ್ರಿ ಭಗವಂತ ಖೂಬಾ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ ಭಾಗಿಯಾಗಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *