ಲಕ್ನೋ: ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಂದು ಇಸ್ಲಾಂ ಧರ್ಮ ತೊರೆದು ನಾರಾಯಣ ಸಿಂಗ್ ತ್ಯಾಗಿಯಾಗಿ ಹಿಂದೂ ಧರ್ಮ ಸ್ವೀಕರಿಸಿದ್ದಾರೆ.
ಇಂದು ಬಳಗ್ಗೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಯತಿ ನರಸಿಂಹಾನಂದ ಸರಸ್ವತಿ ಅವರು ರಿಜ್ವಿಗೆ ಸನಾತನ ಧರ್ಮದ ದೀಕ್ಷೆ ನೀಡಿದರು. ನನ್ನನ್ನು ಇಸ್ಲಾಂನಿಂದ ಹೊರಹಾಕಲಾಗಿದೆ. ಹೀಗಾಗಿ ನಾನು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದೇನೆ ಎಂದು ರಿಜ್ವಿ ಹೇಳಿದ್ದಾರೆ.
ವಾಸಿಂ ರಿಜ್ವಿ ತಮ್ಮ ಹಿಂದೂ ಧರ್ಮ ಸೇರುವ ತಮ್ಮ ಇಚ್ಛೆಯನ್ನು ಹೇಳಿಕೊಂಡಿದ್ದರು. ವಾಸಿಂ ರಿಜ್ವಿ ಯತಿ ನರಸಿಂಹಾನಂದರನ್ನು ತಮ್ಮ ಬೇಡಿಕೆ ಈಡೇರಿಸುವಂತೆ ಕೇಳಿಕೊಂಡಿದ್ದರು. ರಿಜ್ವಿ ಅವರ ಸ್ವ-ಇಚ್ಛೆಯಂತೆ ಈ ಕಾರ್ಯ ನಡೆದಿದೆ ಎಂದು ಯತಿ ನರಸಿಂಹಾನಂದ ಸರಸ್ವತಿ ಹೇಳಿದ್ದಾರೆ.



