Connect with us

Dvgsuddi Kannada | online news portal | Kannada news online

ಜಿ. ಪಂ, ತಾ. ಪಂ ಚುನಾವಣೆ ವಿಳಂಬ; ಹೈಕೋರ್ಟ್ ಮೆಟ್ಟಿಲೇರಿದ ಚುನಾವಣೆ ಆಯೋಗ

ಪ್ರಮುಖ ಸುದ್ದಿ

ಜಿ. ಪಂ, ತಾ. ಪಂ ಚುನಾವಣೆ ವಿಳಂಬ; ಹೈಕೋರ್ಟ್ ಮೆಟ್ಟಿಲೇರಿದ ಚುನಾವಣೆ ಆಯೋಗ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ವಿಳಂಬ ನೀತಿ ವಿರುದ್ಧ  ಚುನಾಣೆ ಆಯೋಗ ಗರಂ ಆಗಿದ್ದು, ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಚುನಾವಣಾ ಆಯೋಗದಿಂದ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಸರ್ಕಾರ ಆಯೋಗ ರಚಿಸಲಾಗಿದೆ. ಆಯೋಗ ವರದಿ ನೀಡಿದ ನಂತರವೇ ಚುನಾವಣೆ ನಡೆಯಬೇಕಿದೆ. ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಸದೇ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದೆ.

ರಾಜ್ಯ ಚುನಾವಣಾ ಆಯೋಗದಿಂದ ಜಿಪಂ, ತಾಪಂ ಚುನಾವಣೆ ವಿಳಂಬದ ಹಿನ್ನಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಂವಿಧಾನದಡಿ ಚುನಾವಣೆಯನ್ನು ಮುಂದೂಡುವಂತಿಲ್ಲ. ಹಿಂದಿನಂತೆಯೇ ಜಿಪಂ ಮತ್ತು ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಿದೆ ಎಂದು ಆಯೋಗದಿಂದ ಮನವಿ ಮಾಡಲಾಗಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಸರ್ಕಾರದಿಂದ ಆಯೋಗ ರಚಿಸಲಾಗಿದ್ದು, ಸರ್ಕಾರದ ಕ್ರಮವನ್ನು ರಾಜ್ಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿದೆ. ಆಯೋಗದ ಪರವಾಗಿಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top