ದಾವಣಗೆರೆ: ಹೈಟೆಕ್ ಫೀಡರ್ ವ್ಯಾಪ್ತಿಯಲ್ಲಿ ಇಂದು (ಡಿ. 08) ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಸ್.ಎಸ್. ಹೈಟೆಕ್ ಫೀಡರ್ವ್ಯಾಪ್ತಿಯಲ್ಲಿನ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ, ರಾಮನಗರ, ಇಂಡಸ್ಟ್ರೀಯಲ್ ಏರಿಯಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಸ್.ಆರ್.ಎಸ್. ಸ್ವಿಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ದಾವಣಗೆರೆ 220 ಕೆವಿ ಸ್ವೀಕರಣಾ ಕೇಂದ್ರದಿಂದ ಹೊರಡುವ 66ಕೆವಿ ವಿದ್ಯುತ್ ಪ್ರಸರಣ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಉಪಕೇಂದ್ರಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆನಗೋಡು, ಅತ್ತಿಗೆರೆ ಮತ್ತು ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬರುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಬ್ಬಾಳು, ಆರಾಧ್ಯ ಕೈಗಾರಿಕೆ, ನಿರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಗಿ, ಕೊಗ್ಗನೂರು, ಚಿನ್ನಸಮುದ್ರ, ಆನಗೋಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ತೋಳಹುಣಸೆ, ಕುರ್ಕಿ, ಕಬ್ಬೂರು, ಗೋಪನಾಳ್, ಕಂದಗಲ್ಲು, ಬಾಡ ಅತ್ತಿಗೆರೆ, ಅತ್ತಿಗೆರೆ, ಹನುಮನಹಳ್ಳಿ, ಹಿರೇತೊಗಲೇರಿ, ರಾಮಗೊಂಡನಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಬಿ.ದುರ್ಗ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬುಳ್ಳಾಪುರ, ಕೊಡಗನೂರು, ಹೆಚ್.ಬಸಾಪುರ, ಬಾಡ ಮಾಯಕೊಂಡ, ನಲ್ಕುಂದ, ಬೊಮ್ಮೆನಹಳ್ಳಿ, ಬಾವಿಹಾಳು, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



