ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತಕ್ಕೀಡಾದ ಪ್ರಕರಣ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಗ್ರಾಮದ ಕ್ರಾಸ್ ಬಳಿ ಸಂಭವಿಸಿದೆ. 26 ಮಕ್ಕಳಲ್ಲಿ ಐದಾರು ಮಕ್ಕಳಿಗೆ ಗಾಯವಾಗಿದೆ.
ತಾಲ್ಲೂಕಿನ ಹಿರೇಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದ ಸಮೀಪದ ಎಸ್ಕೆಒಟಿ ಮೆಮೋರಿಯಲ್ ಶಾಲೆಗೆ ಸೇರಿದ ವಾಹನ ಇದಾಗಿದೆ. ವಿವಿಧ ಊರಿನ 26 ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲೆಗ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ವಾಹನ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೊಲದ ಏರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 26 ವಿದ್ಯಾರ್ಥಿಗಳಲ್ಲಿ ಐದಾರು ಮಕ್ಕಳಿಗೆ ಈ ಅಪಘಾತದಲ್ಲಿ ಗಾಯಗಳಾಗಿವೆ. ಅದೃಷ್ಟವಶಾತ್ ಯಾರೂ ಪ್ರಾಣಾಪಾಯವಾಗಿಲ್ಲ. ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.



