ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಒಡೆದು, ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಮುಜರಾಯಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಗೇಟಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿ ಒಡೆದು 30 ಸಾವಿರದಷ್ಟು ಹಣವನ್ನು ದೊಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಗ್ರಾಮದ ಸಹಾಯಕ ಕುಮಾರಸ್ವಾಮಿ ನೀಡಿದ ಮಾಹಿತಿ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಎ.ಎಂ. ಲೋಹಿತ್, ರಾಜಸ್ವ ನಿರೀಕ್ಷಕ ಸಮೀರ್ ಅವರು ಸ್ಥಳಕ್ಕೆ ಬಂದು ಮಹಜರ್ ಮಾಡಿ, ತಾಲ್ಲೂಕು ಕಚೇರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



