Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ. 28 ರಂದು ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ಡಿ. 28 ರಂದು ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ತಾಲ್ಲೂಕಿನಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿದ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ತೆ ಮಾಡಿ, ಜಪ್ತಿ ಮಾಡಿಕೊಳ್ಳಲಾದ ಧಾನ್ಯವನ್ನು ಡಿ. 28 ರಂದು ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆ 1 ರಲ್ಲಿ ಬಹಿರಂಗ ಹರಾಜು ಮಾಡಲಾಗುವುದು.ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಇಮಾಮ್ ನಗರದ ಝಂಡೆಕಟ್ಟೆ ರಸ್ತೆಯಲ್ಲಿನ ಮಹಮದ್ ಅಲಿ ಇವರಿಗೆ ಸೇರಿದ ವಾಸದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 0.75 ಕ್ವಿಂ. ಅಕ್ಕಿಯನ್ನು ಕಳೆದ ಆಗಸ್ಟ್ 13 ರಂದು. ಇದೇ ಮನೆಯಲ್ಲಿ 6.09 ಕ್ವಿಂ. ಅಕ್ಕಿ ಮತ್ತು 5.34 ಕ್ವಿಂ. ರಾಗಿಯನ್ನು ಆಗಸ್ಟ್ 25 ರಂದು. ಮಾಗಾನಹಳ್ಳಿ ರಸ್ತೆ ಸುಲ್ತಾನ್ ವೇ ಬ್ರಿಡ್ಜ್ ಹಿಂಭಾಗದಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 148.79 ಕ್ವಿಂ. ಅಕ್ಕಿಯನ್ನು ಅಕ್ಟೋಬರ್ 08 ರಂದು ಆಜಾದ್ ನಗರ 7ನೇ ಕ್ರಾಸ್‍ನಲ್ಲಿ ಮನ್ಸೂರ್ ಅಹ್ಮದ್ ಅವರ ವಾಸದ ಮನೆಯಲ್ಲಿ ಸಂಗ್ರಹಿಸಿದ್ದ 44.99 ಕ್ವಿಂ. ಅಕ್ಕಿಯನ್ನು ಅಕ್ಟೋಬರ್ 17 ರಂದು ಆಹಾರ ನಿರೀಕ್ಷಕರು ಭಾಗ-1 ಮತ್ತು ಪೊಲೀಸ್ ಉಪನಿರೀಕ್ಷಕರು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು.

ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿ ಮತ್ತು ರಾಗಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಡಿ.28 ರಂದು ಬೆಳಿಗ್ಗೆ 10.30 ರಿಂದ ಸಂಜೆ 4.30 ಗಂಟೆಯವರೆಗೆ ಆಯಾ ಪ್ರಮಾಣಕ್ಕೆ ಅನುಗುಣವಾಗಿ ವಿವಿಧ ಸಮಯದಲ್ಲಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ 1, ಎ.ಪಿ.ಎಂ.ಸಿ ಆವರಣ, ದಾವಣಗೆರೆ ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top