ದಾವಣಗೆರೆ: ಖಾಸಗಿ ಕಂಪನಿ ಪವರ್ ಲೈನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ತಾಯಿ- ಮಗ ವಿಷ ಸೇವನೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಖಾಸಗಿ ಕಂಪನಿ ಪವರ್ ಲೈನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಜಿಲ್ಲೆಯ ಜಗಳೂರು ತಾಲ್ಲೂಕಿನ ರೈತರು ಧರಣಿ ನಡೆಸಿದ್ದು, ಈ ವೇಳೆ ರೈತ ಮಹಿಳೆ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ವಿಷ ಸೇವಿಸಿದ ಘಟನೆ ನಡೆದಿದೆ.

ರೈತ ಮಹಿಳೆ ಸಿದ್ದಮ್ಮ ಶಾಂತವೀರಯ್ಯ (50) ಹಾಗೂ ಆಕೆಯ ಪುತ್ರ ಉಜ್ಜನಗೌಡ (25)ನಿಗೆ ವಿಷ ಸೇವನೆ ಮಾಡಿದ್ದು, ಜಗಳೂರು ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜಗಳೂರು ತಾಲೂಕಿನ ಬಿದರಿಕೆರೆ ಗ್ರಾಮದ ರಿನ್ಯೂವ್ ಪಾವರ್ ಎಂಬ ಖಾಸಗಿ ಕಂಪನಿ, ಪವರ್ ಲೈನ್ ಕಾಮಗಾರಿ ಆರಂಭ ಮಾಡಿದೆ. ರೈತರ ಪರವಾನಿಗೆ ಪರಿಹಾರವಿಲ್ಲದೇ ಕಾಮಗಾರಿ ಆರಂಭ ಮಾಡಲಾಗಿದೆ. ಬಹುತೇಕ ಸಣ್ಣ ಹಾಗೂ ಅತಿ ಸಣ್ಣ ರೈತರ ಜಮೀನು ನಾಶವಾಗಿದೆ. ಹೀಗಾಗಿ ರೈತರು ನಿರಂತರ ಹೋರಾಟ ಮಾಡುತ್ತಿದ್ದ ಕಂಪನಿ ಮಾತ್ರ ಇದಕ್ಕೆ ಪ್ರತಿಕ್ರಿಸುತ್ತಿಲ್ಲ. ಇದರಿಂದ ನೊಂದ ರೈತ ಮಹಿಳೆ ಮತ್ತು ಆಕೆಯ ಮಗ ಧರಣಿ ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹಿರೇಗೌಡರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *