ಜಿಲ್ಲಾಧಿಕಾರಿಗಳು ಬಾಸಿಸಂ ಬಿಟ್ಟು ಎಚ್ಚರಿಕೆಯಿಂದ ಕೆಲಸ ಮಾಡಿ: ಸಿಎಂ ಬಸವರಾಜ ಬೊಮ್ಮಾಯಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಜಿಲ್ಲಾಧಿಕಾರಿಗಳು ಅಧಿಕಾರ ಚಲಾಯಿಸುವುದಲ್ಲ. ಬಾಸಿಸಂ ಬಿಟ್ಟು, ಮ್ಯಾಜಿಸ್ಟ್ರೇಟ್‌ ರೀತಿ ಕೆಲಸ ಮಾಡಬೇಡಿ ಎಂದು ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಡಿಸಿ ಸಭೆಯಲ್ಲಿ ಮಾತನಾಡಿದ ಅವರು, ಕೆಳ ಹಂತದ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿರಬೇಕು ಎಂಬುದನ್ನು ಬಿಡಿ. ವಿವೇಚನೆ ಬಳಸಿ ಕೆಲಸ ಮಾಡಿ. ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾಮಾನ್ಯರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಮಟ್ಟದ ಆಡಳಿತ, ಯೋಜನೆಗಳ ಅನುಷ್ಠಾನದ ಬಗ್ಗೆ  ದೀರ್ಘ ಚರ್ಚೆ ನಡೆಸಲಾಯಿತು. ಸರ್ಕಾರದ ಆಡಳಿತವನ್ನು  ಜನರಿಗೆ ಇನ್ನಷ್ಟು ಹತ್ತಿರ ಕೊಂಡೊಯ್ಯುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೊಸ ಪ್ರಯತ್ನ ನಡೆಯಲಿದೆ ಎಂದರು.

ಪ್ರವಾಹ ಪರಿಹಾರ ಸರಿಯಾಗಿ ವಿತರಿಸದ  ಜಿಲ್ಲಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಸಿಎಂ, ಪರಿಹಾರ ಆ್ಯಪ್ ನಲ್ಲಿ ಅಪ್ ಲೋಡ್ ಮಾಡಿದ 48 ಗಂಟೆಗಳ ಒಳಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೊವಿಡ್ ನಿರ್ವಹಣೆ ಸಂಬಂಧ ಕೊರೊನಾ ಎದುರಿಸಲೂ ಸಹ ಪೂರ್ವ ತಯಾರಿಗೆ ಸೂಚನೆ ನೀಡಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *