ಬೆಂಗಳೂರು: ಹಿಂದೂ ದೇವಾಲಯಗಳು ಸರ್ಕಾರದ ಹಿಡಿತದಿಂದ ಭಕ್ತರ ಕೈಗೆ ನೀಡಲು ರಾಜ್ಯ ಸರ್ಕಾರ ವಿಶೇಷ ಕಾಯ್ದೆ ಜಾರಿಗೆ ತರಲು ಮುಂದಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಬೇಕು. ಭಕ್ತರು ಕೇವಲ ಬಿಜೆಪಿ, ಆರ್ ಎಸ್ಎಸ್ ಕಾರ್ಯಕರ್ತರಲ್ಲಿ, ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು ಎಂದದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು.
ಬಿಜೆಪಿ ಆರ್ಎಸ್ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೇಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಯಾವುದೇ ಕಾರಣಕ್ಕೂ ಸರ್ಕಾರ ಹಿಂದೂ ದೇವಾಲಯಗಳನ್ನು ಯಾವುದೆ ಸಂಘ ಸಂಸ್ಥೆಗೆ ನೀಡುವುದಿಲ್ಲ ಎಂದರು.



