ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ(ಎಸ್ಸಿಪಿ/ಟಿಎಸ್ಪಿ)ಯಡಿ ಪ.ಜಾತಿ/ಪ.ಪಂಗಡದ 18 ರಿಂದ 35 ವಯೋಮಾನದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿ ನೀಡಲಾಗುವುದು.
ಎಸ್.ಎಸ್.ಎಲ್.ಸಿ/ಐ.ಟಿ.ಐ/ಡಿಪ್ಲೋಮ ಮೆಕಾನಿಕಲ್/ಬಿ.ಇ ಮೆಕಾನಿಕಲ್ ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿಎನ್ಸಿ ಆಪರೇಟರ್ ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಕನ್ವೆನ್ಶಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಕನ್ವೆನ್ಶಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕ್ಯಾನಿಕಲ್, ಪ್ರೊಡಕ್ಷನ್ ಇಂಜಿನಿಯರ್, ಟೂಲ್ ರೂಮ್ ಮಷಿನಿಷ್ಟ್ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ನಡೆಸಲಾಗುವುದು. ತರಬೇತಿಯ ಅವಧಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನವಾಗಿರುತ್ತದೆ.
ತರಬೇತಿಯು ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಸಿ & ಡಿ ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆಎಸ್ಆರ್ಟಿಸಿ ಡಿಪೋ ಹತ್ತಿರ, ಹರಿಹರ ಪೊ.ನಂ: 08192-243937, 9916018111 8884488202, 8711913947 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



