ರೈತರಿಗೆ ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್: 10 ಕೋಟಿ ರೈತರಿಗೆ 20 ಸಾವಿರ ಕೋಟಿ ಹಣ ಜಮಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ರೈತಾಪಿ ವರ್ಗಕ್ಕೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ ಕೊಟ್ಟಿದೆ.  ಪಿಎಂ-ಕಿಸಾನ್‌ ಸಮ್ಮಾನ್‌ ನಿಧಿಯ 10 ನೇ ಕಂತು ಇಂದು  ಬಿಡುಗಡೆ ಮಾಡಿದ್ದು, ಈ ಯೋಜನೆಯಲ್ಲಿ ದೇಶದ 10 ಕೋಟಿಗೂ ಅಧಿಕ ರೈತರಿಗೆ 20 ಸಾವಿರ ಕೋಟಿ ರೂ. ಬಿಡುಗಡೆಯಾಗಿದೆ.

ಪ್ರತಿವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಅಂದರೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ. 1.6 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇಂದ್ರ ಸರ್ಕಾರ ನೀಡಿದ್ದು, ಇಂದು ಮತ್ತೊಂದು ಕಂತು ಬಿಡುಗಡೆಯಾಗಿದೆ.  ಕರ್ನಾಟಕದ ಒಟ್ಟು 34,26,401 ರೈತರಿಗೆ 685 ಕೋಟಿ 28 ಲಕ್ಷ 2ಸಾವಿರ ರೂ. ಹಣ ಬಿಡುಗಡೆಯಾಗಿದೆ ಎಂದು ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ 97ಲಕ್ಷ ರೂ.ಮೊತ್ತ ಬಿಡುಗಡೆಯಾದಂತಾಗಿದೆ‌.

ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು,ಯೋಜನೆಯಡಿ ವಾರ್ಷಿಕ ರೂ 6000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

2850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ.ಸಾಧ್ಯವಾದಷ್ಟು , ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್‌ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ , ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್‌ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರುವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯ ಸರ್ಕಾರ  ಪರಿಶೀಲಿಸುತ್ತಿದೆ.

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *