ದಾವಣಗೆರೆ; ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದ್ರೆ, ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಶಾಸಕ ಎಸ್. ಎ ರವೀಂದ್ರನಾಥ್ ಆಗ್ರಹಿಸಿದ್ದಾರೆ.
ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಡೆದು, ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ ನನಗೆ ಸಚಿವ ಸ್ಥಾನ ನೀಡಬೇಕು. ಬೇರೆಯವರಿಗೆ ನೀಡಲು ಬರುವುದಿಲ್ಲ ಎಂದು ಹೇಳಿದರು.ಅನಾರೋಗ್ಯದ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುತ್ತಾರೆಂಬುದು ಸುಳ್ಳು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅವಧಿ ಪೂರೈಸಲಿದ್ದಾರೆ ಎಂದರು.



