ಜ.26ರಿಂದ ಜನಸೇವಕ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿ ಜಾರಿ; ಮನೆ ಬಾಗಿಲಿಗೆ ಸರ್ಕಾರಿ ಸೇವೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕಲಬುರಗಿ :ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ಜನಸೇವಕ ಯೋಜನೆಯನ್ನು ಜನವರಿ 26 ರಿಂದ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆಳಂದ ಮೊರಾರ್ಜಿ ದೇಸಾಯಿ ವಸತಿ ನಿಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ ವರ್ಷ ಜಾರಿಗೆ ತಂದಿದ್ದ ಜನಸೇವಕ ಯೋಜನೆಯನ್ನು ಜನವರಿ 26 ರಿಂದ ಉಳಿದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದರು.

ಆಧಾರ್ ಕಾರ್ಡ್, ಅಂಗವಿಕರ ವೇತನ, ವಿಧವಾ ಪಿಂಚಣಿ, ವೃದ್ಯಾಪ್ಯ ವೇತನ ಸೇರಿ 8 ಇಲಾಖೆಗಳ 58 ಸೇವೆಗಳನ್ನು ಜನರು ಮನೆಗೆ ತಲುಪಿಸುವ ಜನಸೇವಕ ಸೇವೆಗೆ 2021 ರ ನವೆಂಬರ್ 1 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಜಾರಿಗೆ ತರಲಾಗಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *