ಕಲಬುರಗಿ :ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ಜನಸೇವಕ ಯೋಜನೆಯನ್ನು ಜನವರಿ 26 ರಿಂದ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆಳಂದ ಮೊರಾರ್ಜಿ ದೇಸಾಯಿ ವಸತಿ ನಿಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ ವರ್ಷ ಜಾರಿಗೆ ತಂದಿದ್ದ ಜನಸೇವಕ ಯೋಜನೆಯನ್ನು ಜನವರಿ 26 ರಿಂದ ಉಳಿದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದರು.
ಆಧಾರ್ ಕಾರ್ಡ್, ಅಂಗವಿಕರ ವೇತನ, ವಿಧವಾ ಪಿಂಚಣಿ, ವೃದ್ಯಾಪ್ಯ ವೇತನ ಸೇರಿ 8 ಇಲಾಖೆಗಳ 58 ಸೇವೆಗಳನ್ನು ಜನರು ಮನೆಗೆ ತಲುಪಿಸುವ ಜನಸೇವಕ ಸೇವೆಗೆ 2021 ರ ನವೆಂಬರ್ 1 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಜಾರಿಗೆ ತರಲಾಗಿತ್ತು.



