ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದಿಂದ  ಸೂರ್ಯ ನಮಸ್ಕಾರ ಕಾರ್ಯಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ದಾವಣಗೆರೆ: ಯೋಗಯುಕ್ತ ರೋಗಮುಕ್ತ ಸಮಾಜಕ್ಕಾಗಿ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದಿಂದ ಮಕರ ಸಂಕ್ರಾಂತಿ ದಿನದಂದು ಮನೆ ಮನೆಯಲ್ಲಿ ಸಾಮೂಹಿಕ  ಸೂರ್ಯ ನಮಸ್ಕಾರ  ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ  ಕರೆ ನೀಡಿದೆ.

ಭಾರತ ಸರ್ಕಾರ, ಆಯುಷ್ ಮಂತ್ರಾಲಯ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ಯೋಗ ಸಂಸ್ಥೆ  ವತಿಯಿಂದ ಮಕರ ಸಂಕ್ರಾಂತಿ ದಿನದಂದು ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ಕರೆ ನೀಡಲಾಗಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆ ಜಿಲ್ಲೆಯ ಜನರು ಇಡೀ ದೇಶದಲ್ಲಿ ವಿಶ್ವ ದಾಖಲೆಯ 75 ಕೋಟಿ ಸೂರ್ಯ ನಮಸ್ಕಾರದಲ್ಲಿ ಭಾಗಿಯಾಗಿ ಕೊರೊನಾ ನಿಯಮ ಪಾಲಿಸಿ  ಯಶಸ್ವಿಗೊಳಿಸಬೇಕು ಎಂದು ಕರೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ 9844040813, 9449629061, 9845685224, 9845451787 ಸಂಪರ್ಕಿಸಿ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *