ವೀಕೆಂಡ್ ಕರ್ಫ್ಯೂ ನಡುವೆಯೇ ಜಗಳೂರು ಶಾಸಕ ರಾಮಚಂದ್ರಪ್ಪ ಅದ್ಧೂರಿ ಬರ್ತ್ ಡೇ ಪಾರ್ಟಿ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದರೆ, ರಾಜಕಾರಣಿಗಳೇ ಕರ್ಫ್ಯೂ ನಿಯಮ ಪಾಲಿಸುತ್ತಿಲ್ಲ. ಜಗಳೂರು ಬಿಜೆಪಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಇಂದು ನೂರಾರು ಜನರ ನಡುವೆ ಅದ್ಧೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

 

ದಾವಣಗೆರೆ ನಗರದ ಕೆ.ಬಿ. ಬಡಾವಣೆಯ ಮನೆ ಪಕ್ಕದಲ್ಲಿ ಬೃಹತ್ ಶಾಮಿಯಾನ ಹಾಕಿಸಿ ಜನ್ಮದಿನ ಆಚರಿಸಿಕೊಂಡರು. ಬಿಜೆಪಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಭಾಗಿಯಾಗಿದ್ದರು. ಇನ್ನು ಕೊರೊನಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಬೆಕಾದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೇ ಸಭೆಯಲ್ಲಿ ಭಾಗಿಯಾಗಿದ್ದು ಇನ್ನೊಂದು ವಿಶೇಷ. ಜನ್ಮ ದಿನದ ಸಮಾರಂಭಕ್ಕೆ ಸ್ವತಃ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿತ್ತು. ಸಮಾರಂಭಕ್ಕೆ ಬಂದವರಿಗೆ ವಿವಿಧ ಬಗೆಯ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *