ಬೆಂಗಳೂರು: ಪೆಡ್ಲರ್ಗಳಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡ್ತಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಇವರಿಬ್ಬರೂ ಕಾನ್ಸ್ಟೇಬಲ್ಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಭದ್ರತಾ ಕಾರ್ಯದಲ್ಲಿದ್ದರು ಎಂದು ತಿಳಿದು ಬಂದಿದೆ.
ಶಿವಕುಮಾರ್ ಹಾಗೂ ಸಂತೋಷ್ ಪೊಲೀಸ್ ಕಾನ್ಸ್ಟೇಬಲ್ ಗಳಾಗಿದ್ದು,ಕೋರಮಂಗಲ ಪೊಲೀಸ್ ಠಾಣೆಯ ಸಿಬ್ಬಂಗಳಾಗಿದ್ದಾರೆ. ಈ ಇಬ್ಬರು ಮೋಸ್ಟ್ ವಾಂಟೆಡ್ ಪೆಡ್ಲರ್ ಗಳಿಂದ ಗಾಂಜಾ ಖರೀದಿಸಿ, ಮಾರಾಟಕ್ಕೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಆರ್. ಟಿ. ನಗರದ 80 ಅಡಿ ರಸ್ತೆ ಬಳಿ ಕೃತ್ಯ ನಡೆಸುತ್ತಿದ್ದರು. ಸಿಎಂ ಮನೆಯ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ಸದ್ಯ ಆರ್.ಟಿ. ನಗರ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.



