ದಾವಣಗೆರೆ: ಮದುವೆ, ಜಾತ್ರೆ, ಉತ್ಸವಗಳನ್ನು ಮುಂದೂಡಿ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರತಿ ದಿನ ಐದು ನೂರರಿಂದ ಸಾವಿರದ ವರೆಗೆ ಬಂದು ನಿಂತಿದೆ. ಹೀಗಾಗಿ ಸಾರ್ವಜನಿಕರು ಮದುವೆ, ಜಾತ್ರೆ, ಉತ್ಸವಗಳನ್ನು ಮುಂದೂಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ.

ಹಬ್ಬ, ಜಾತ್ರೆ, ಮದುವೆ ಸಮಾರಂಭಗಳಿಂದ ಸೋಂಕು ಹೆಚ್ಚಾಗುತ್ತಿದೆ. ನಾವು ಕೂಡ ಎಷ್ಟು ಅಂತಾ ನಿರ್ಬಂಧ ವಿಧಿಸಲು ಸಾಧ್ಯ. ನೀವೇ ಸ್ವಯಂ ಪ್ರೇರಣೆಯಿಂದ ಹಬ್ಬ, ಜಾತ್ರೆ, ಮದುವೆ ಸಮಾರಂಭಗಳನ್ನು ಮುಂದೂಡಿ. ಮಾತು ಎತ್ತಿದ್ದರೆ, ಎಫ್ ಐ ಆರ್ ಹಾಕಿ ಅಂತೀರಾ.. ಆದರೆ, ವಾಸ್ತವದಲ್ಲಿ ಜನರು ಪ್ರಜ್ಞಾವಂತರಾಗಬೇಕು. ಕೊರೊನಾ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದರು.

ಕೊರೊನಾ ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಹಾಕಿಸಿಕೊಂಡವರು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು. ಇನ್ನು ಕೂಡ ಒಂದೂ ಡೋಸ್ ಲಸಿಕೆ ಹಾಕಿಸಿಕೊಳ್ಳದವರು ಇದ್ದಾರೆ. ಇಂಥವರಿಗೆ ಕೊರೊನಾ ಬಂದರೆ, ನಿಯಂತ್ರಣ ಮಾಡುವುದು ಕಷ್ಟ. ಹೀಗಾಗಿ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು. ಜೊತೆಗೆ ಮಾಸ್ಕ್ ಹಾಕದೇ ಹೊರಗಡೆ ಓಡಾಡಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಈ ಮೂಲಕ ಕೊರೊನಾ ನಿಯಂತ್ರಿಸಲು ಎಲ್ಲರು ಜಿಲ್ಲಾಡಳಿತ ಜೊತೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *