Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಒನ್ ಯೋಜನೆಗೆ ಸಿಎಂ ಬಸವರಾಜ‌ ಬೊಮ್ಮಾಯಿ ಚಾಲನೆ

ಪ್ರಮುಖ ಸುದ್ದಿ

ದಾವಣಗೆರೆ: ಗ್ರಾಮ ಒನ್ ಯೋಜನೆಗೆ ಸಿಎಂ ಬಸವರಾಜ‌ ಬೊಮ್ಮಾಯಿ ಚಾಲನೆ

ದಾವಣಗೆರೆ: ಗ್ರಾಮ ಒನ್‌ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಜ. 26ರಂದು ದಾವಣಗೆರೆಯ ಮಾಯಕೊಂಡದಲ್ಲಿ ಚಾಲನೆ ನೀಡಲಿದ್ದಾರೆ.

ಗ್ರಾಮೀಣ ಜನರಿಗೆ ಒಂದೇ ಸೂರಿನಡಿ ಸೇವೆಗಳನ್ನು ಒದಗಿಸಲು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ರಾಮ ಒನ್‌ ಯೋಜನೆಯನ್ನು ಪ್ರಾಯೋಗಿಕವಾಗಿ ಯಶಸ್ವಿಗೊಳಿಸಿದ ದಾವಣಗೆರೆ ಜಿಲ್ಲೆಯಿಂದಲೇ ಅಧಿಕೃತವಾಗಿ ಆರಂಭಿಸಲು ರಾಜ್ಯ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಉಡುಪಿ ಸೇರಿದಂತೆ ಬೀದರ್‌, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜ. 26ರಂದು ದಾವಣಗೆರೆಯ ಮಾಯಕೊಂಡದಲ್ಲಿ ಚಾಲನೆ ನೀಡುವರು.

ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಆರಂಭಿಸಿರುವ ಗ್ರಾಮ ಒನ್ ಯೋಜನೆ ಜನೋಪಯೋಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 3,000 ಗ್ರಾಮ ಒನ್‌ ಕೇಂದ್ರಗಳನ್ನು ತೆರೆಯಲು ಸರಕಾರ ಮುಂದಾಗಿದೆ.

ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಕಾರ್ಡ್‌, ಕಾರ್ಮಿಕ ಇಲಾಖೆ ಸೇವೆಗಳು, ರಾಜ್ಯ ಪೊಲೀಸ್‌ ಇಲಾಖೆ ಸೇವೆಗಳು, ಕೃಷಿ ಇಲಾಖೆ ಸೇವೆಗಳು, ರೇಷ್ಮೆ ಇಲಾಖೆ ಸೇವೆಗಳು, ಪಶುಸಂಗೋಪನೆ ಇಲಾಖೆ ಸೇವೆಗಳು, ಮಾಹಿತಿ ಹಕ್ಕು ಕಾಯ್ದೆ ಸೇವೆಗಳು, ಸಿಎಂ ಪರಿಹಾರ ನಿಧಿ ಸೇವೆಗಳು ಸೇರಿದಂತೆ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಗ್ರಾಮದಲ್ಲಿಯೇ ನೀಡುವ ಗುರಿ ಇದ್ದು, ಈಗ 400ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top