ದಾವಣಗೆರೆ: ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರಿಬ್ಬರು ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಕೊಮಾರನಹಳ್ಳಿ ಬಳಿ ನಡೆದಿದೆ.
ರಭಸವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವರಾಜ್ (35) ಹಾಗೂ ಪ್ರಮೋದ್ (33) ಮೃತಪಟ್ಟವರಾಗಿದ್ದಾರೆ. ಹೊನ್ನಾಳಿಯಿಂದ ದಾವಣಗೆರೆಗೆ ಬೈಕ್ನಲ್ಲಿ ವೇಳೆ ಹಾವೇರಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಶಿವರಾಜ್ ನ್ಯಾಮತಿ ಪಟ್ಟಣ ನಿವಾಸಿ ಮತ್ತು ಮೃತ ಪ್ರಮೋದ್ ದಾವಣಗೆರೆ ನಗರದ ಬಂಬೂ ಬಜಾರ್ ನಿವಾಸಿಗಳೆಂದು ಗುರುತಿಸಲಾಗಿದೆ. ಈ ಘಟನೆ ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



