ದಾವಣಗೆರೆ: ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್08-ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಕಾಮಗಾರಿ ನಿರ್ವಹಿಸಲು ಜ.28 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಉಂಟಾಗಲಿದೆ.
ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್ಪಿ ಆಫೀಸ್, ಆರ್ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್ಪಿಎಸ್ ನಗರ 2ನೇ ಹಂತ, ಎಸ್ಎಮ್ಕೆ ನಗರ, ವಾಲ್ಮೀಕಿ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



